ಮುಂಬೈ: ಕೊರೊನಾ ವೈರಸ್ ಸೋಂಕಿತ ಹಾಗೂ ತಬ್ಲೀಗಿ ಜಮಾತ್ ಸದಸ್ಯ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಮಾರ್ಚ್ 6 ರಿಂದ 8ರವರೆಗೆ ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಇತರೆ ಸದಸ್ಯರೊಂದಿಗೆ ಮುಂಬೈಗೆ ಬಂದಿದ್ದ ಇವರು ಮೂಲತಹ ಅಸ್ಸಾಂ ರಾಜ್ಯದವರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಂಕು ದೃಢಪಟ್ಟಿದ್ದರಿಂದ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗಿನ ಜಾವ ಬಾತ್ ರೂಮಿನಲ್ಲಿ ಬ್ಲೇಡಿನ ಮೂಲಕ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.