<p><strong>ಅಲೀಗಡ: </strong>ಲಾಕ್ಡೌನ್ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಉಳಿದುಕೊಂಡಿದ್ದ ಶ್ರೀಲಂಕಾದ ಇಬ್ಬರು ಪ್ರಜೆಗಳು ಸೇರಿದಂತೆ ಒಟ್ಟು 13 ತಬ್ಲೀಗಿ ಜಮಾತ್ ಸದಸ್ಯರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಬುಧವಾರ ಪೊಲೀಸರು ತಿಳಿಸಿದ್ದಾರೆ.</p>.<p>ಶ್ರೀಲಂಕಾದ ಇಬ್ಬರು ಪ್ರಜೆಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಉಳಿದ 11 ಮಂದಿ ಜಮಾತ್ ಸದಸ್ಯರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾ ಪ್ರಜೆಗಳ ಬಂಧನ ಕುರಿತು ದೆಹಲಿಯಲ್ಲಿರುವ ಶ್ರೀಲಂಕಾ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>13 ಮಂದಿಯ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 188 (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಮತ್ತು 269 (ಜೀವಕ್ಕೆ ಅಪಾಯಕಾರಿಯಾದ ಸೋಂಕು ಹರಡುವ ವಿಚಾರದಲ್ಲಿ ನಿರ್ಲಕ್ಷ್ಯ) ಅನ್ವಯ ಪ್ರರಕಣ ದಾಖಲಿಸಲಾಗಿದೆ.</p>.<p>ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾದ ಪ್ರಜೆಗಳ ಮೇಲೆ ವಿದೇಶಿಯರ ಕಾಯ್ದೆಯ ಸೆಕ್ಷನ್ 14 ಮತ್ತು 14 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ನಲ್ಲಿ ನಡೆದ ತಬ್ಲೀಗಿ ಜಮಾತ್ ಸಭೆಯಲ್ಲಿ ಭಾರತದ ವಿವಿಧ ಕಡೆಗಳಿಂದ ಮತ್ತು ವಿದೇಶಗಳಿಂದ ಸುಮಾರು 9 ಸಾವಿರ ಜನ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲೀಗಡ: </strong>ಲಾಕ್ಡೌನ್ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಉಳಿದುಕೊಂಡಿದ್ದ ಶ್ರೀಲಂಕಾದ ಇಬ್ಬರು ಪ್ರಜೆಗಳು ಸೇರಿದಂತೆ ಒಟ್ಟು 13 ತಬ್ಲೀಗಿ ಜಮಾತ್ ಸದಸ್ಯರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಬುಧವಾರ ಪೊಲೀಸರು ತಿಳಿಸಿದ್ದಾರೆ.</p>.<p>ಶ್ರೀಲಂಕಾದ ಇಬ್ಬರು ಪ್ರಜೆಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಉಳಿದ 11 ಮಂದಿ ಜಮಾತ್ ಸದಸ್ಯರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾ ಪ್ರಜೆಗಳ ಬಂಧನ ಕುರಿತು ದೆಹಲಿಯಲ್ಲಿರುವ ಶ್ರೀಲಂಕಾ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>13 ಮಂದಿಯ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 188 (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಮತ್ತು 269 (ಜೀವಕ್ಕೆ ಅಪಾಯಕಾರಿಯಾದ ಸೋಂಕು ಹರಡುವ ವಿಚಾರದಲ್ಲಿ ನಿರ್ಲಕ್ಷ್ಯ) ಅನ್ವಯ ಪ್ರರಕಣ ದಾಖಲಿಸಲಾಗಿದೆ.</p>.<p>ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾದ ಪ್ರಜೆಗಳ ಮೇಲೆ ವಿದೇಶಿಯರ ಕಾಯ್ದೆಯ ಸೆಕ್ಷನ್ 14 ಮತ್ತು 14 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ನಲ್ಲಿ ನಡೆದ ತಬ್ಲೀಗಿ ಜಮಾತ್ ಸಭೆಯಲ್ಲಿ ಭಾರತದ ವಿವಿಧ ಕಡೆಗಳಿಂದ ಮತ್ತು ವಿದೇಶಗಳಿಂದ ಸುಮಾರು 9 ಸಾವಿರ ಜನ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>