ಕಲ್ಲು ತೂರಾಟ: ಕೊರೊನಾ ಸೋಂಕು ತಪಾಸಣೆಗೆ ಬಂದಿದ್ದ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಸ್ಥಳದಿಂದ ಓಡಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ನ ತಟಪಟ್ಟಿ ಬಖಲ್ನಲ್ಲಿ ನಡೆದಿದೆ. ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಆಶಾ ಕಾರ್ಯಕರ್ತೆಯರು, ಶುಶ್ರೂಷಕರು ಸ್ಥಳದಿಂದ ಓಡಿದರು. ಈ ಸಂಬಂಧ ಎಂಟು ಜನರನ್ನು ಬಂಧಿಸಲಾಗಿದೆ.