ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್ನಾರ್‌ ನದಿ ಯೋಜನೆಗೆ ತಮಿಳುನಾಡು ಆಕ್ಷೇಪ

ಸಿಡಬ್ಲ್ಯುಸಿ ಕರೆದಿದ್ದ ಸಭೆ ಅಪೂರ್ಣ
Last Updated 24 ಫೆಬ್ರುವರಿ 2020, 19:50 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಣ ಪೆನ್ನಾರ್‌ ನದಿ (ಪಿನಾಕಿನಿ, ದಕ್ಷಿಣ ಪೆನ್ನಾರ್‌) ನೀರು ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಕರೆದಿದ್ದ ಸಭೆ ಅಪೂರ್ಣಗೊಂಡಿದೆ.

ನದಿ ತೀರದಲ್ಲಿ ಕರ್ನಾಟಕ ಕೈಗೊಂಡಿರುವ ಯೋಜನೆಗಳ ಬಗ್ಗೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಯೋಜನೆಗಳ ಕುರಿತು ಅಭಿಪ್ರಾಯ ಮಂಡಿಸುವಂತೆ ಕರ್ನಾಟಕಕ್ಕೆ ಸೂಚಿಸಿದ ಆಯೋಗದ ಅಧ್ಯಕ್ಷ ಆರ್‌.ಕೆ. ಜೈನ್‌ ಮುಂದಿನ ಸಭೆಯನ್ನು ಮಾರ್ಚ್‌ 10ಕ್ಕೆ ನಿಗದಿಪಡಿಸಿದರು.

ಮಾರ್ಕಂಡೇಯ ನದಿಗೆ ಚೆಕ್‌ ಡ್ಯಾಂ ನಿರ್ಮಿಸುವುದರಿಂದ ತಮಿಳುನಾಡಿಗೆ ತೊಂದರೆಯಾಗುತ್ತದೆ ಎಂದು ತಮಿಳುನಾಡು ವಾದಿಸಿತು.

ಇದನ್ನು ತಿರಸ್ಕರಿಸಿದ ಕರ್ನಾಟಕ, ಚೆಕ್‌ ಡ್ಯಾಂನ ಶೇಕಡಾ 75ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ಯೋಜನೆಯಿಂದ ಕೋಲಾರ, ಬಂಗಾರಪೇಟೆ ಮತ್ತು ಮಾಲೂರಿನ ಹಳ್ಳಿಗಳಿಗೆ ಮತ್ತು ಹಲವು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಕರ್ನಾಟಕ ವಾದ ಮಂಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT