<p><strong>ಚೆನ್ನೈ: </strong>ತಮಿಳುನಾಡಿನ ಕೆಲವು ಭಾಗಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಮತ್ತು ಸದಸ್ಯರ ಹುದ್ದೆಗಳನ್ನು ಹರಾಜು ಹಾಕುತ್ತಿರುವುದು ನಡೆದಿದೆ.</p>.<p>ಗ್ರಾಮದ ಮುಖ್ಯಸ್ಥರೇ ಈ ಹುದ್ದೆಗಳನ್ನು ಹರಾಜು ಹಾಕುವ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾದ ಬಳಿಕ ಈ ಹುದ್ದೆಗಳನ್ನು ₹2 ಲಕ್ಷದಿಂದ ₹50 ಲಕ್ಷಕ್ಕೆ ಹರಾಜು ಹಾಕುತ್ತಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p>.<p>ಹರಾಜಿನಲ್ಲಿ ಅತಿ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡುವವರು ಗ್ರಾಮದ ಮುಖ್ಯಸ್ಥರು ನೇಮಿಸುವ ಸಮಿತಿ ಬಳಿ ಹಣವನ್ನು ಠೇವಣಿ ಇಡಬೇಕು. ಹರಾಜು ಪ್ರಕ್ರಿಯೆ ನಡೆದ ಬಳಿಕ ಈ ಹುದ್ದೆಗಳಿಗೆ ಯಾರೂ ನಾಮಪತ್ರ ಸಲ್ಲಿಸದಂತೆ ಗ್ರಾಮದ ಮುಖ್ಯಸ್ಥರು ಆದೇಶ ಹೊರಡಿಸುತ್ತಾರೆ. ಒಂದು ವೇಳೆ, ಯಾರಾದರೂ ಚುನಾವಣೆಗೆ ಸ್ಪರ್ಧಿಸಿದರೂ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ಇದು ಗ್ರಾಮದ ಮುಖ್ಯಸ್ಥರ ಆದೇಶವನ್ನು ಗ್ರಾಮಸ್ಥರು ಗಂಭೀರವಾಗಿ ಪರಿಗಣಿಸುವುದಕ್ಕೆ ಸಾಕ್ಷಿ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.</p>.<p><strong>ಪಂಚಾಯಿತಿ ಹುದ್ದೆಗಳಿಗೆ ಹರಾಜು ನಡೆಯುವುದು ಹೊಸತಲ್ಲ:</strong>ದಶಕಗಳಿಂದಲೂ ಪಂಚಾಯಿತಿ ಹುದ್ದೆಗಳನ್ನು ಹರಾಜು ಹಾಕಿಯೇ ಪಡೆಯಲಾಗುತ್ತಿದೆ. ಅದರಲ್ಲೂ ಪ್ರಬಲ ಜಾತಿಗಳಿರುವ ಗ್ರಾಮಗಳಲ್ಲೇ ಇದು ಹೆಚ್ಚು. ಜನರಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆ ಜಾಗೃತಿ ಮೂಡಿಸಿದರೂ ಯಾವುದೇ ರೀತಿ ಪರಿಣಾಮ ಬೀರಿಲ್ಲ’ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ತಮಿಳುನಾಡಿನ ಕೆಲವು ಭಾಗಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಮತ್ತು ಸದಸ್ಯರ ಹುದ್ದೆಗಳನ್ನು ಹರಾಜು ಹಾಕುತ್ತಿರುವುದು ನಡೆದಿದೆ.</p>.<p>ಗ್ರಾಮದ ಮುಖ್ಯಸ್ಥರೇ ಈ ಹುದ್ದೆಗಳನ್ನು ಹರಾಜು ಹಾಕುವ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾದ ಬಳಿಕ ಈ ಹುದ್ದೆಗಳನ್ನು ₹2 ಲಕ್ಷದಿಂದ ₹50 ಲಕ್ಷಕ್ಕೆ ಹರಾಜು ಹಾಕುತ್ತಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p>.<p>ಹರಾಜಿನಲ್ಲಿ ಅತಿ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡುವವರು ಗ್ರಾಮದ ಮುಖ್ಯಸ್ಥರು ನೇಮಿಸುವ ಸಮಿತಿ ಬಳಿ ಹಣವನ್ನು ಠೇವಣಿ ಇಡಬೇಕು. ಹರಾಜು ಪ್ರಕ್ರಿಯೆ ನಡೆದ ಬಳಿಕ ಈ ಹುದ್ದೆಗಳಿಗೆ ಯಾರೂ ನಾಮಪತ್ರ ಸಲ್ಲಿಸದಂತೆ ಗ್ರಾಮದ ಮುಖ್ಯಸ್ಥರು ಆದೇಶ ಹೊರಡಿಸುತ್ತಾರೆ. ಒಂದು ವೇಳೆ, ಯಾರಾದರೂ ಚುನಾವಣೆಗೆ ಸ್ಪರ್ಧಿಸಿದರೂ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ಇದು ಗ್ರಾಮದ ಮುಖ್ಯಸ್ಥರ ಆದೇಶವನ್ನು ಗ್ರಾಮಸ್ಥರು ಗಂಭೀರವಾಗಿ ಪರಿಗಣಿಸುವುದಕ್ಕೆ ಸಾಕ್ಷಿ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.</p>.<p><strong>ಪಂಚಾಯಿತಿ ಹುದ್ದೆಗಳಿಗೆ ಹರಾಜು ನಡೆಯುವುದು ಹೊಸತಲ್ಲ:</strong>ದಶಕಗಳಿಂದಲೂ ಪಂಚಾಯಿತಿ ಹುದ್ದೆಗಳನ್ನು ಹರಾಜು ಹಾಕಿಯೇ ಪಡೆಯಲಾಗುತ್ತಿದೆ. ಅದರಲ್ಲೂ ಪ್ರಬಲ ಜಾತಿಗಳಿರುವ ಗ್ರಾಮಗಳಲ್ಲೇ ಇದು ಹೆಚ್ಚು. ಜನರಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆ ಜಾಗೃತಿ ಮೂಡಿಸಿದರೂ ಯಾವುದೇ ರೀತಿ ಪರಿಣಾಮ ಬೀರಿಲ್ಲ’ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>