ಹರಾಜಿನಲ್ಲಿ ಅತಿ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡುವವರು ಗ್ರಾಮದ ಮುಖ್ಯಸ್ಥರು ನೇಮಿಸುವ ಸಮಿತಿ ಬಳಿ ಹಣವನ್ನು ಠೇವಣಿ ಇಡಬೇಕು. ಹರಾಜು ಪ್ರಕ್ರಿಯೆ ನಡೆದ ಬಳಿಕ ಈ ಹುದ್ದೆಗಳಿಗೆ ಯಾರೂ ನಾಮಪತ್ರ ಸಲ್ಲಿಸದಂತೆ ಗ್ರಾಮದ ಮುಖ್ಯಸ್ಥರು ಆದೇಶ ಹೊರಡಿಸುತ್ತಾರೆ. ಒಂದು ವೇಳೆ, ಯಾರಾದರೂ ಚುನಾವಣೆಗೆ ಸ್ಪರ್ಧಿಸಿದರೂ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ಇದು ಗ್ರಾಮದ ಮುಖ್ಯಸ್ಥರ ಆದೇಶವನ್ನು ಗ್ರಾಮಸ್ಥರು ಗಂಭೀರವಾಗಿ ಪರಿಗಣಿಸುವುದಕ್ಕೆ ಸಾಕ್ಷಿ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.