ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಗಾಜಾ ಚಂಡಮಾರುತವು ತಮಿಳುನಾಡಿನಲ್ಲಿ ದೊಡ್ಡ ಪ್ರಮಾಣದ ವಿನಾಶಕ್ಕೆ ಕಾರಣವಾಗಿದೆ. ಗಾಜಾದಿಂದಾದ ವಿನಾಶದ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ವಿವರ ನೀಡಿದ್ದೇನೆ. ಜ್ಞಾಪನ ಪತ್ರವನ್ನೂ ಸಲ್ಲಿಸಿದ್ದೇನೆ. ಕೇಂದ್ರ ಸರ್ಕಾರದಿಂದ ₹ 15 ಸಾವಿರ ಕೋಟಿ ಪರಿಹಾರವನ್ನು ಕೇಳಿದ್ದೇವೆ. ಮಧ್ಯಂತರ ಪರಿಹಾರವಾಗಿ ₹ 1,500 ಕೋಟಿ ನೀಡುವಂತೆ ಕೋರಿದ್ದೇವೆ’ ಎಂದರು.