2014ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದ ಎಐಎಡಿಎಂಕೆ ಮುಖ್ಯಸ್ಥೆ ದಿವಂಗತ ಜಯಲಲಿತಾ, ಪ್ರಚಾರ ಸಭೆಗಳಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಭಿವೃದ್ಧಿಯ ಯೋಜನೆಗಳನ್ನು ಮುಂದಿಟ್ಟು, ‘ಉತ್ತಮ ಆಡಳಿತಗಾರರು ಯಾರು? ಗುಜರಾತಿನ ಮೋದಿಯೇ? ಅಥವಾ ತಮಿಳುನಾಡಿನ ಲೇಡಿಯೇ?(ಮಹಿಳೆಯೇ)’ ಎಂದು ಪ್ರಶ್ನಿಸಿದ್ದರು. ಈ ಪ್ರಶ್ನೆ ಸಾಕಷ್ಟು ಪ್ರಚಾರ ಪಡೆದುಕೊಂಡಿತ್ತು.