ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ಹಿರಿಯ ಸಂಸದ ಅನ್ವರ್, ‘ಇಂಥ ಮಾತು ಯಾರಿಗೂ ಶೋಭೆ ತರುವುದಿಲ್ಲ. ಆ ವೇದಿಕೆಯಲ್ಲಿ ನಾನು ಇದ್ದಿದ್ದರೆ ಅಂಥ ಒಡಕಿನ ಮಾತುಗಳನ್ನು ಆಡಲು ಬಿಡುತ್ತಿರಲಿಲ್ಲ. ಕಾಂಗ್ರೆಸ್ ಯಾವತ್ತೂ ಹಿಂದೂ–ಮುಸ್ಲಿಂ ಎಂಬ ಭೇದಭಾವ ಮಾಡುವುದಿಲ್ಲ. ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ನಾನೆಂದೂ ಚುನಾವಣೆಯಲ್ಲಿ ಗೆಲ್ಲಲು ಜನರ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿಲ್ಲ. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿ ಚುನಾವಣೆ ಗೆಲ್ಲುವುದಕ್ಕಿಂತಲೂ ಸೋಲುವುದನ್ನೇ ನಾನು ಇಷ್ಟಪಡುವೆ’ ಎಂದು ತಾರೀಖ್ ಅನ್ವರ್ ಹೇಳಿದ್ದಾರೆ.