ಆಡಳಿತಾರೂಢ ವೈಎಸ್ಆರ್ಸಿಪಿ ಪಕ್ಷ ದ್ವೇಷದ ರಾಜಕಾರಣ ನಡೆಸುತ್ತಿದ್ದು ಟಿಡಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಿ ಊರಿನಿಂದ ಹೊರಗಟ್ಟಲಾಗುತ್ತಿದೆ ಎಂದು ನಾಯ್ಡು ಆರೋಪಿಸಿದ್ದಾರೆ. ಇದನ್ನು ವಿರೋಧಿಸಿ ಟಿಡಿಪಿಯು ಗುಂಟೂರ್ನ ಪಲ್ನಾಡು ಪ್ರದೇಶದ ಆತ್ಮಕೂರ್ಗೆ ‘ಚಲೋ ಆತ್ಮಕೂರ್’ ಪ್ರತಿಭಟನೆ ಹಮ್ಮಿಕೊಂಡಿತ್ತು.