‘2013ರಲ್ಲಿ ಕೇದಾರನಾಥದಲ್ಲಿ ಸಂಭವಿಸಿದ ಮೇಘಸ್ಫೋಟದ ದುರಂತದ ಸಂದರ್ಭದಲ್ಲಿ ಐಎಎಫ್ ಸಿಬ್ಬಂದಿಯ ಕಾರ್ಯನಿರ್ವಹಣೆ, ಧೈರ್ಯದಿಂದ ಪ್ರೇರಿತಗೊಂಡಿದ್ದ ಅವಳು, ಐಎಎಫ್ಗೆ ಸೇರಬೇಕು ಎಂದು ಕನಸು ಕಂಡಿದ್ದಳು. ಪುಸ್ತಕ ಮಳಿಗೆಗಳಿಂದ ಮಾಹಿತಿ ಸಂಗ್ರಹಿಸಿ, ಆ ದಿಕ್ಕಿನಲ್ಲಿ ಸಿದ್ಧತೆ ನಡೆಸಿ ಯಶಸ್ವಿಯಾಗಿದ್ದಾಳೆ’ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.