‘ಈ ತಿದ್ದುಪಡಿ ಜಾರಿಗೆ ತಂದರೆ, ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ. ಬೀದಿ ಬೀದಿಯಲ್ಲಿ ವರ್ಗಾವಣೆಯ ದಂಧೆ ನಡೆಸುವ ದಲ್ಲಾಳಿಗಳು ಹುಟ್ಟಿಕೊಳ್ಳುತ್ತಾರೆ. ಇಂತಹ ಕೆಟ್ಟ ಮಸೂದೆಯಿಂದ ರಾಜ್ಯದಲ್ಲಿ ಅಶಾಂತಿ ನಿರ್ಮಾಣವಾಗುತ್ತದೆ. ಆಯ್ಕೆ ಸಮಿತಿಯ ಪರಿಶೀಲನೆಗೆ ಒಪ್ಪಿಸಬೇಕು’ ಎಂದು ಕಾಂಗ್ರೆಸ್ನ ಕೆಲವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.