ಭಾರತದ ವಿವಿಧ ಬ್ಯಾಂಕ್ಗಳಿಂದ ಸುಮಾರು ₹ 9 ಸಾವಿರ ಕೋಟಿ ಸಾಲ ಪಡೆದು ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಲ್ಯ ಲಂಡನ್ನಲ್ಲಿ ತಲೆ ಮರೆಸಿಕೊಂಡಿದ್ದು, ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಲಲಿತ್ ಮೋದಿ ದೇಶ ತೊರೆದಿದ್ದಾರೆ. ಪುಣೆ ಮೂಲದ ಮಾಹಿತಿ ಹಕ್ಕುಗಳ ಕಾರ್ಯಕರ್ತ ವಿಹಾರ್ ಧ್ರುವೆ ಎನ್ನುವವರು ಮಾಹಿತಿ ಹಕ್ಕು ಕಾಯ್ದೆ ಅಡಿ ಖರ್ಚಿನ ಪ್ರಶ್ನೆ ಕೇಳಿದ್ದರು.