<p><strong>ಲಖನೌ:</strong> ಬಿಸ್ಕತ್ ಕಾರ್ಖಾನೆಯ ಓವನ್ನಲ್ಲಿ ಸಿಲುಕಿ ಬಾಲಕ ಸಜೀವವಾಗಿ ಬೆಂದಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಖೈರಪುರ್ ರಾಮನಾಥ ಗ್ರಾಮದ ದೀಪಕ್ ಜೈಸ್ವಾಲ್ (15) ಮೃತ ಬಾಲಕ.</p>.<p>ಬಾಲಕನ ತಂದೆಯ ಬೇಕರಿಯಲ್ಲಿಯೇ ಈ ದುರಂತ ಸಂಭವಿಸಿದೆ.ನೌಕರರೆಲ್ಲ ಮನೆಗೆ ಹೋದ ಬಳಿಕ ಬಾಲಕ ಓವನ್ ಬಂದ್ ಮಾಡಲು ಹೋಗಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಅದರೊಳಗೆ ಸಿಲುಕಿಕೊಂಡಿದ್ದಾನೆ. ಅಲ್ಲಿಂದ ಹೊರ ಬರುವುದು ಆತನಿಗೆ ಸಾಧ್ಯವಾಗಲಿಲ್ಲ. ಕೆಲ ಸಮಯದ ನಂತರ ಮಗನನ್ನು ಹುಡುಕಲು ಪ್ರಾರಂಭಿಸಿದ ಪೋಷಕರಿಗೆ ಬಾಲಕ ಓವನ್ನಲ್ಲಿ ಸಿಲುಕಿಕೊಂಡಿರುವುದು ಗೊತ್ತಾಗಿದೆ.</p>.<p>ಬಾಗಿಲು ಒಡೆದು ಬಾಲಕನನ್ನು ಹೊರತೆಗೆದಿದ್ದಾರೆ. ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಅವನನ್ನು ಆಸ್ಪತ್ರೆಗೆ ಸಾಗಿಲಾಯಿತು. ಆದರೆ ವೈದ್ಯರು, ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದರು.</p>.<p>ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಬಿಸ್ಕತ್ ಕಾರ್ಖಾನೆಯ ಓವನ್ನಲ್ಲಿ ಸಿಲುಕಿ ಬಾಲಕ ಸಜೀವವಾಗಿ ಬೆಂದಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಖೈರಪುರ್ ರಾಮನಾಥ ಗ್ರಾಮದ ದೀಪಕ್ ಜೈಸ್ವಾಲ್ (15) ಮೃತ ಬಾಲಕ.</p>.<p>ಬಾಲಕನ ತಂದೆಯ ಬೇಕರಿಯಲ್ಲಿಯೇ ಈ ದುರಂತ ಸಂಭವಿಸಿದೆ.ನೌಕರರೆಲ್ಲ ಮನೆಗೆ ಹೋದ ಬಳಿಕ ಬಾಲಕ ಓವನ್ ಬಂದ್ ಮಾಡಲು ಹೋಗಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಅದರೊಳಗೆ ಸಿಲುಕಿಕೊಂಡಿದ್ದಾನೆ. ಅಲ್ಲಿಂದ ಹೊರ ಬರುವುದು ಆತನಿಗೆ ಸಾಧ್ಯವಾಗಲಿಲ್ಲ. ಕೆಲ ಸಮಯದ ನಂತರ ಮಗನನ್ನು ಹುಡುಕಲು ಪ್ರಾರಂಭಿಸಿದ ಪೋಷಕರಿಗೆ ಬಾಲಕ ಓವನ್ನಲ್ಲಿ ಸಿಲುಕಿಕೊಂಡಿರುವುದು ಗೊತ್ತಾಗಿದೆ.</p>.<p>ಬಾಗಿಲು ಒಡೆದು ಬಾಲಕನನ್ನು ಹೊರತೆಗೆದಿದ್ದಾರೆ. ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಅವನನ್ನು ಆಸ್ಪತ್ರೆಗೆ ಸಾಗಿಲಾಯಿತು. ಆದರೆ ವೈದ್ಯರು, ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದರು.</p>.<p>ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>