‘ಬಾಲಕ ಮನೆಗೆ ತಲುಪುವಷ್ಟರಲ್ಲಿ ಆತನ ದೇಹದ ಭಾಗಗಳು ಸಾಕಷ್ಟು ಸುಟ್ಟು ಹೋಗಿದ್ದವು’ ಎಂದಿರುವ ಪೊಲೀಸರು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆದರೆ, ಇದನ್ನು ಅನುಮಾನಾಸ್ಪದ ಪ್ರಕರಣವಾಗಿ ನೋಡುತ್ತಿರುವ ಪೊಲೀಸರು, ‘ಜೈ ಶ್ರೀರಾಮ್ ಎಂದು ಘೋಷಣೆ ಕೂಗದ ಕಾರಣಕ್ಕೆ ನನ್ನ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು ಹೇಳುವಂತೆ ಬಾಲಕ ಮತ್ತು ಆತನ ತಾಯಿಯ ಮೇಲೆ ಕೆಲವರು ಒತ್ತಡ ಹೇರಿದ್ದಾರೆ’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.