ಇಲ್ಲಿನ ‘ಕಿಮ್ಸ್’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನಿತಾ, ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡುತ್ತಾ, ‘ಶಾಸಕ ಕೋನಪ್ಪ ಅವರು ಹಿಂದಿನಿಂದಲೂ ಬುಡಕಟ್ಟು ಜನರನ್ನು ಅರಣ್ಯ ಇಲಾಖೆಯ ವಿರುದ್ಧ ಎತ್ತಿಕಟ್ಟಿ ಗಲಭೆ ನಡೆಸುತ್ತಾ ಬಂದಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.