<p><strong>ಹೈದರಾಬಾದ್:</strong> ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರನ್ನು ಭೇಟಿಯಾಗುವುದಕ್ಕೂ ಮುನ್ನ ತೆಲಂಗಾಣದ ಬಿಜೆಪಿ ನಿಯೋಗವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ನಿಯೋಗವು ರಾಜ್ಯದಲ್ಲಿನ ಕೊರೊನಾ ಸೋಂಕಿನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಭೇಟಿಯಾಗಲು ಮುಂದಾಗಿತ್ತು.</p>.<p>ಬಿಜೆಪಿ ನಾಯಕ ಡಾ. ಕೆ.ಲಕ್ಷ್ಮಣ್, ಎನ್.ರಾಮಚಂದ್ರ ರಾವ್, ಎಂಎಲ್ಸಿ ಎನ್.ರಾಮಚಂದ್ರ ರಾವ್ ಹಾಗೂ ಶಾಸಕ ರಾಜಾ ಸಿಂಗ್ ನಿಯೋಗವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/india-crosses-uk-to-become-4th-worst-hit-nation-due-to-coronavirus-735793.html" itemprop="url">ಅತಿ ಹೆಚ್ಚು ಕೋವಿಡ್ ಪ್ರಕರಣ: ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೆ ಭಾರತ</a></p>.<p>‘ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿಯ ಬಗ್ಗೆ ಜ್ಞಾಪಕ ಪತ್ರವನ್ನು ನೀಡುವ ಉದ್ದೇಶದಿಂದ ಪಕ್ಷದ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಉದ್ದೇಶಿಸಿದ್ದೆ. ಆದರೆ, ಅದಕ್ಕೂ ಮುನ್ನ ಮನೆಗೆ ಬಂದ ಪೊಲೀಸರು ನಮ್ಮನ್ನು ಗೃಹಬಂಧನದಲ್ಲಿ ಇರಿಸಿದರು’ ಎಂದು ಡಾ. ಕೆ.ಲಕ್ಷ್ಮಣ್ ಹೇಳಿದ್ದಾರೆ.</p>.<p>ತೆಲಂಗಾಣದಲ್ಲಿ ಗುರುವಾರ ಹೊಸದಾಗಿ 208 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಸದ್ಯ 2,162 ಸಕ್ರಿಯ ಪ್ರಕರಣಗಳಿವೆ. ಈವರೆಗೆ 165 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರನ್ನು ಭೇಟಿಯಾಗುವುದಕ್ಕೂ ಮುನ್ನ ತೆಲಂಗಾಣದ ಬಿಜೆಪಿ ನಿಯೋಗವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ನಿಯೋಗವು ರಾಜ್ಯದಲ್ಲಿನ ಕೊರೊನಾ ಸೋಂಕಿನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಭೇಟಿಯಾಗಲು ಮುಂದಾಗಿತ್ತು.</p>.<p>ಬಿಜೆಪಿ ನಾಯಕ ಡಾ. ಕೆ.ಲಕ್ಷ್ಮಣ್, ಎನ್.ರಾಮಚಂದ್ರ ರಾವ್, ಎಂಎಲ್ಸಿ ಎನ್.ರಾಮಚಂದ್ರ ರಾವ್ ಹಾಗೂ ಶಾಸಕ ರಾಜಾ ಸಿಂಗ್ ನಿಯೋಗವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/india-crosses-uk-to-become-4th-worst-hit-nation-due-to-coronavirus-735793.html" itemprop="url">ಅತಿ ಹೆಚ್ಚು ಕೋವಿಡ್ ಪ್ರಕರಣ: ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೆ ಭಾರತ</a></p>.<p>‘ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿಯ ಬಗ್ಗೆ ಜ್ಞಾಪಕ ಪತ್ರವನ್ನು ನೀಡುವ ಉದ್ದೇಶದಿಂದ ಪಕ್ಷದ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಉದ್ದೇಶಿಸಿದ್ದೆ. ಆದರೆ, ಅದಕ್ಕೂ ಮುನ್ನ ಮನೆಗೆ ಬಂದ ಪೊಲೀಸರು ನಮ್ಮನ್ನು ಗೃಹಬಂಧನದಲ್ಲಿ ಇರಿಸಿದರು’ ಎಂದು ಡಾ. ಕೆ.ಲಕ್ಷ್ಮಣ್ ಹೇಳಿದ್ದಾರೆ.</p>.<p>ತೆಲಂಗಾಣದಲ್ಲಿ ಗುರುವಾರ ಹೊಸದಾಗಿ 208 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಸದ್ಯ 2,162 ಸಕ್ರಿಯ ಪ್ರಕರಣಗಳಿವೆ. ಈವರೆಗೆ 165 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>