ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸ್ವತಃ ಹನುಮಂತ ರಾವ್ ಅವರೇ ಪರೀಕ್ಷೆಗೆ ಒಳಗಾದ ಬಳಿಕ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಾಂಕ್ರಾಮಿಕ ರೋಗದ ಮಧ್ಯೆಯೇ ಹಿರಿಯ ಕಾಂಗ್ರೆಸ್ ನಾಯಕ ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಲಾಕ್ಡೌನ್ ಅವಧಿಯಲ್ಲಿ ಅವರು ಮುಂಚೂಣಿಯಲ್ಲಿದ್ದ ಆರೋಗ್ಯ ಕಾರ್ಯಕರ್ತರು ಮತ್ತು ನಿರ್ಗತಿಕರಿಗೆ ಪಡಿತರ, ಸ್ಯಾನಿಟೈಸೇಶನ್ ಕಿಟ್ಗಳನ್ನು ವಿತರಿಸುತ್ತಿದ್ದರು.