‘ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಬೇಕು. ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದವರನ್ನು ಗಲ್ಲಿಗೆ ಏರಿಸಿಬೇಕು’ ಎಂಬ ಆಗ್ರಹ ಪ್ರತಿಭಟನೆಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ. ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಇರಿಸಲಾಗಿದ್ದ ತೆಲಂಗಾಣದ ಶಾದ್ನಗರ ಪೊಲೀಸ್ ಠಾಣೆ ಎದುರು ಭಾರಿ ಪ್ರತಿಭಟನೆ ನಡೆದಿದೆ. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ. ದೆಹಲಿ, ಮುಂಬೈನಲ್ಲೂ ಪ್ರತಿಭಟನೆಗಳು ನಡೆದಿವೆ.