<p><strong>ಹೈದರಬಾದ್</strong>: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲುಗು ಸಿನಿಮಾದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ವಿಜಯ ಬಾಪಿನೀಡು ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83ವರ್ಷ ವಯಸ್ಸಾಗಿತ್ತು.</p>.<p>’ಅಮೆರಿಕದಲ್ಲಿ ನೆಲೆಸಿರುವ ಹಿರಿಯ ಮಗಳು ಭಾರತಕ್ಕೆ ಮರಳಿದ ಬಳಿಕ ಅವರ ಅಂತ್ಯಕ್ರಿಯೆ ನೆರವೇರಲಿದೆ‘ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.</p>.<p>ಪಶ್ಚಿಮ ಗೋದಾವರಿ ಜಿಲ್ಲೆಯ ವಿಜಯ ಅವರು ಮೆಗಾಸ್ಟಾರ್ ಚಿರಂಜೀವಿ, ಶೋಭನ್ ಬಾಬು, ಕೃಷ್ಣ ಸೇರಿದಂತೆ ಅನೇಕ ನಾಯಕರ ಹಲವು ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದ್ದರು.</p>.<p>ಇವರು ನಿರ್ದೇಶಿಸಿದ ನಟ ಚಿರಂಜೀವಿ ನಟಿಸಿದ ‘ಗ್ಯಾಂಗ್ಲೀಡರ್’ಸಿನಿಮಾವು ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ‘ಆಜ್ ಕಾ ಗೂಂಡಾರಾಜ್’ಹೆಸರಿನಲ್ಲಿ ಹಿಂದಿಯಲ್ಲಿ ಇದೇ ಸಿನಿಮಾ ನಿರ್ಮಾಣಗೊಂಡಿತ್ತು.ಇದಲ್ಲದೇ, ಚಿರಂಜೀವಿ ಜೊತೆಗೆ ‘ಬಿಗ್ಬಾಸ್’, ‘ಕೈದಿ ನಂ.786’, ಹಾಗೂ ‘ಮಗಧೀರುಡು’ಕೂಡ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿತ್ತು.</p>.<p>ಬಾಪಿನೀಡು ಅವರ ಮೃತದೇಹಕ್ಕೆ ಚಿರಂಜೀವಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ‘ಇಂದು ನನ್ನ ಪಾಲಿಗೆ ಅತ್ಯಂತ ಕೆಟ್ಟ ದಿನ, ನನ್ನ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡ ಭಾವನೆಯಾಗುತ್ತಿದೆ’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಬಾದ್</strong>: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತೆಲುಗು ಸಿನಿಮಾದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ವಿಜಯ ಬಾಪಿನೀಡು ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83ವರ್ಷ ವಯಸ್ಸಾಗಿತ್ತು.</p>.<p>’ಅಮೆರಿಕದಲ್ಲಿ ನೆಲೆಸಿರುವ ಹಿರಿಯ ಮಗಳು ಭಾರತಕ್ಕೆ ಮರಳಿದ ಬಳಿಕ ಅವರ ಅಂತ್ಯಕ್ರಿಯೆ ನೆರವೇರಲಿದೆ‘ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.</p>.<p>ಪಶ್ಚಿಮ ಗೋದಾವರಿ ಜಿಲ್ಲೆಯ ವಿಜಯ ಅವರು ಮೆಗಾಸ್ಟಾರ್ ಚಿರಂಜೀವಿ, ಶೋಭನ್ ಬಾಬು, ಕೃಷ್ಣ ಸೇರಿದಂತೆ ಅನೇಕ ನಾಯಕರ ಹಲವು ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದ್ದರು.</p>.<p>ಇವರು ನಿರ್ದೇಶಿಸಿದ ನಟ ಚಿರಂಜೀವಿ ನಟಿಸಿದ ‘ಗ್ಯಾಂಗ್ಲೀಡರ್’ಸಿನಿಮಾವು ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿತ್ತು. ‘ಆಜ್ ಕಾ ಗೂಂಡಾರಾಜ್’ಹೆಸರಿನಲ್ಲಿ ಹಿಂದಿಯಲ್ಲಿ ಇದೇ ಸಿನಿಮಾ ನಿರ್ಮಾಣಗೊಂಡಿತ್ತು.ಇದಲ್ಲದೇ, ಚಿರಂಜೀವಿ ಜೊತೆಗೆ ‘ಬಿಗ್ಬಾಸ್’, ‘ಕೈದಿ ನಂ.786’, ಹಾಗೂ ‘ಮಗಧೀರುಡು’ಕೂಡ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿತ್ತು.</p>.<p>ಬಾಪಿನೀಡು ಅವರ ಮೃತದೇಹಕ್ಕೆ ಚಿರಂಜೀವಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ‘ಇಂದು ನನ್ನ ಪಾಲಿಗೆ ಅತ್ಯಂತ ಕೆಟ್ಟ ದಿನ, ನನ್ನ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡ ಭಾವನೆಯಾಗುತ್ತಿದೆ’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>