ತುಮಕೂರು: ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬದ ಸಮಾರೋಪ ಕಾರ್ಯಕ್ರಮದ ಪ್ರಯುಕ್ತ ಬಾನುವಾರ ಆಯೋಜಿಸಿದ್ದ ಯುವಶಕ್ತಿ ಆಸ್ಪೋಟನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.
ಸುಮಾರು 20 ನಿಮಿಷ ಭಾಷಣ ಮಾಡಿದರು. ಭಾಷಣದಲ್ಲಿ ಯುವಕರು ಮತ್ತು ರಾಮಕೃಷ್ಣ ವಿವೇಕಾನಂದ ಆಶ್ರಮದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಸಿದ್ಧಗಂಗಾ ಸ್ಮಾಮೀಜಿ ಅವರ ಶಿಕ್ಷಣ ಸೇವೆಯನ್ನು ಶ್ಲಾಘಿಸಿದರು. ರಾಮಕೃಷ್ಣ ಪರಮಹಂಸರು ಹಾಗೂ ವಿವೇಕಾನಂದರ ದಾರಿಯಲ್ಲಿ ಸಿದ್ಧಗಂಗಾ ಸ್ವಾಮೀಜಿಯವರು ರಾಷ್ಟ್ರನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ಖುದ್ದು ಹಾಜರಾಗುವ ಇಚ್ಛೆ ಇತ್ತು. ಆದರೆ ಅಧಿವೇಶನ ಇರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದರು.