<p><strong>ಮುಂಬೈ:</strong> ‘ಜಿಹಾದ್’ ಎಂಬ ಪದ ಬಳಸಿದ ಕಾರಣಕ್ಕೆ ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಲಾಗದು ಎಂದು ಮಹಾರಾಷ್ಟ್ರದ ಅಕೋಲದ ನ್ಯಾಯಾಲಯ ಹೇಳಿದೆ.</p>.<p>ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮೂವರನ್ನು ದೋಷಮುಕ್ತಗೊಳಿಸಿದ ನ್ಯಾಯಾಧೀಶ ಎ.ಎಸ್. ಜಾಧವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಅಬ್ದುಲ್ ರಜಾಕ್ (24), ಶೋಯೆಬ್ ಖಾನ್ (24) ಮತ್ತು ಸಲೀಂ ಮಲಿಕ್ ಆರೋಪಮುಕ್ತಗೊಂಡವರು.</p>.<p>2015ರಲ್ಲಿ ಪುಸದ್ ಪ್ರದೇಶದ ಮಸೀದಿಯೊಂದರ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇವರ ಮೇಲೆ ಪ್ರಕರಣ ದಾಖಲಾಗಿತ್ತು.</p>.<p>ಗೋಮಾಂಸ ನಿಷೇಧದ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಚೂರಿಯಿಂದ ರಜಾಕ್ ಇಬ್ಬರು ಪೊಲೀಸರ ಮೇಲೆ ಇರಿದಿದ್ದ ಎಂದು ಸರ್ಕಾರಿ ವಕೀಲರು ಆರೋಪಿಸಿದ್ದರು.</p>.<p>ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆಮುಸ್ಲಿಂ ಯುವಕರನ್ನು ಪ್ರೇರೇಪಿಸುವ ಪಿತೂರಿಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂದು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಿಸಿತ್ತು.</p>.<p>‘ಆರೋಪಿ ರಜಾಕ್ ಗೋಮಾಂಸ ನಿಷೇಧದ ವಿರುದ್ಧ ಸರ್ಕಾರ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ’ ಎಂದು ನ್ಯಾಯಾಧೀಶರು ಹೇಳಿದ್ದಾರೆ.</p>.<p>’ಆತ ‘ಜಿಹಾದ್’ ಪದವನ್ನು ಬಳಸಿದ್ದಾನೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಈ ಪದವನ್ನು ಬಳಸಿದ್ದಾನೆ ಎನ್ನುವ ಕಾರಣಕ್ಕೆ ಆತನಿಗೆ ಉಗ್ರನೆಂಬ ಹಣೆಪಟ್ಟಿ ಕಟ್ಟುವುದು ಸರಿಯಲ್ಲ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಜಿಹಾದ್’ ಎಂಬುದು ಅರೇಬಿಕ್ ಪದ ಇದಕ್ಕೆ ನಿಘಂಟಿನಲ್ಲಿ ‘ಹೋರಾಟ’ ಎಂಬ ಅರ್ಥ ಇದೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.</p>.<p>ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ರಜಾಕ್ ಈಗಾಗಲೇ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು, ಈಗ ಆತನನ್ನು ಬಿಡುಗಡೆಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಜಿಹಾದ್’ ಎಂಬ ಪದ ಬಳಸಿದ ಕಾರಣಕ್ಕೆ ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಲಾಗದು ಎಂದು ಮಹಾರಾಷ್ಟ್ರದ ಅಕೋಲದ ನ್ಯಾಯಾಲಯ ಹೇಳಿದೆ.</p>.<p>ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮೂವರನ್ನು ದೋಷಮುಕ್ತಗೊಳಿಸಿದ ನ್ಯಾಯಾಧೀಶ ಎ.ಎಸ್. ಜಾಧವ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>ಅಬ್ದುಲ್ ರಜಾಕ್ (24), ಶೋಯೆಬ್ ಖಾನ್ (24) ಮತ್ತು ಸಲೀಂ ಮಲಿಕ್ ಆರೋಪಮುಕ್ತಗೊಂಡವರು.</p>.<p>2015ರಲ್ಲಿ ಪುಸದ್ ಪ್ರದೇಶದ ಮಸೀದಿಯೊಂದರ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇವರ ಮೇಲೆ ಪ್ರಕರಣ ದಾಖಲಾಗಿತ್ತು.</p>.<p>ಗೋಮಾಂಸ ನಿಷೇಧದ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಚೂರಿಯಿಂದ ರಜಾಕ್ ಇಬ್ಬರು ಪೊಲೀಸರ ಮೇಲೆ ಇರಿದಿದ್ದ ಎಂದು ಸರ್ಕಾರಿ ವಕೀಲರು ಆರೋಪಿಸಿದ್ದರು.</p>.<p>ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆಮುಸ್ಲಿಂ ಯುವಕರನ್ನು ಪ್ರೇರೇಪಿಸುವ ಪಿತೂರಿಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂದು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಿಸಿತ್ತು.</p>.<p>‘ಆರೋಪಿ ರಜಾಕ್ ಗೋಮಾಂಸ ನಿಷೇಧದ ವಿರುದ್ಧ ಸರ್ಕಾರ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ’ ಎಂದು ನ್ಯಾಯಾಧೀಶರು ಹೇಳಿದ್ದಾರೆ.</p>.<p>’ಆತ ‘ಜಿಹಾದ್’ ಪದವನ್ನು ಬಳಸಿದ್ದಾನೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಈ ಪದವನ್ನು ಬಳಸಿದ್ದಾನೆ ಎನ್ನುವ ಕಾರಣಕ್ಕೆ ಆತನಿಗೆ ಉಗ್ರನೆಂಬ ಹಣೆಪಟ್ಟಿ ಕಟ್ಟುವುದು ಸರಿಯಲ್ಲ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಜಿಹಾದ್’ ಎಂಬುದು ಅರೇಬಿಕ್ ಪದ ಇದಕ್ಕೆ ನಿಘಂಟಿನಲ್ಲಿ ‘ಹೋರಾಟ’ ಎಂಬ ಅರ್ಥ ಇದೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.</p>.<p>ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ರಜಾಕ್ ಈಗಾಗಲೇ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು, ಈಗ ಆತನನ್ನು ಬಿಡುಗಡೆಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>