ಶ್ರೀನಗರ: ಶ್ರೀನಗರದ ಲಾಲ್ ಚೌಕ್ ಪ್ರದೇಶದಲ್ಲಿ ಭಾನುವಾರ ಗಸ್ತಿನಲ್ಲಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮೇಲೆ ಉಗ್ರರು ನಡೆಸಿದ ಗ್ರೇನೇಡ್ ದಾಳಿಯಲ್ಲಿ ಇಬ್ಬರು ಯೋಧರು ಹಾಗೂ ಏಳು ಮಂದಿ ನಾಗರಿಕರು ಗಾಯಗೊಂಡಿದ್ದಾರೆ.
ಪ್ರತಾಪ್ ಉದ್ಯಾನದ ಬಳಿ ನಿಯೋಜನೆಗೊಂಡಿದ್ದ ಸಿಆರ್ಪಿಎಫ್ ಯೋಧರನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿಆರ್ಪಿಎಫ್ ವಕ್ತಾರ ಪಂಕಜ್ ಸಿಂಗ್ ಮಾತನಾಡಿ, ಚಾರ್ಲಿ 121 ಕಂಪನಿತಂಡದ ಇಬ್ಬರು ಯೋಧರು ಸೇರಿ ಇಬ್ಬರು ನಾಗರಿಕರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
RS Sahi, IG, CRPF, in Srinagar: This is an incident of grenade throwing during the busy Sunday market. 2 CRPF personnel sustained minor injuries. Those who threw the grenade want to create apprehension among locals so that normalcy does not return. https://t.co/BdMNiS6UrPpic.twitter.com/BotyyS7xUk
ಭಾನುವಾರ ಮಾರುಕಟ್ಟೆ ಎಂದೇ ಪ್ರಸಿದ್ಧಿಯಾಗಿರುವ ಈ ಮಾರುಕಟ್ಟೆಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಂತಹ ಜನಸಂದಣಿಪ್ರದೇಶದ ಬಳಿಯೇ ಗ್ರೇನೇಡ್ ಸ್ಫೋಟ ಸಂಭವಿಸಿದ್ದರಿಂದಾಗಿ ಕೆಲಕಾಲ ಆತಂಕದ ವಾತಾವಾರಣ ನಿರ್ಮಾಣವಾಗಿತ್ತು. ಘಟನೆ ನಡೆದ ಕೂಡಲೆ ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದುಗಸ್ತು ತಿರುಗುತ್ತಿದ್ದಾರೆ.