2–3 ಉಗ್ರರು ಜಮ್ಮು–ಶ್ರೀನಗರ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕ ಬಸ್ಸೊಂದನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಕೂಡಲೇ ಚಾಲಕ ವೇಗವಾಗಿ ಬಸ್ಸನ್ನು ಚಲಾಯಿಸಿ ಪ್ರಯಾಣಿಕರನ್ನು ರಕ್ಷಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಗ್ರರು ಭಾರತೀಯ ಸೇನೆಯ ಯೋಧರ ಸಮವಸ್ತ್ರ ಧರಿಸಿದ್ದರೆಂದೂ ಚಾಲಕ ತಿಳಿಸಿದ್ದಾರೆ ಎಂದುಎನ್ಡಿಟಿವಿವರದಿ ಮಾಡಿದೆ. ತಕ್ಷಣವೇ ಭದ್ರಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.