<p><strong>ನವದಹಲಿ: </strong>ಜಗತ್ತಿನಾದ್ಯಂತ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕೋವಿಡ್–19 ಸೋಂಕು ದೊಡ್ಡ ಸವಾಲು ಮಾತ್ರವಲ್ಲ. ಅದೊಂದು ಅವಕಾಶವೂ ಹೌದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಜಾಗತಿಕ ಪಿಡುಗಾದ ಕೋವಿಡ್–19 ದೊಡ್ಡ ಸವಾಲು. ಆದರೆ, ಅದೊಂದು ಅವಕಾಶವೂ ಆಗಿದೆ. ಬಿಕ್ಕಟ್ಟಿನ ಸಂದರ್ಭಗಳಲ್ಲಿ ಹೊಸರೀತಿಯ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮಲ್ಲಿರುವ ಭಾರಿ ಸಂಖ್ಯೆಯ ವಿಜ್ಞಾನಿಗಳು, ಎಂಜಿನಿಯರ್ಗಳು, ಅಂಕಿ–ಅಂಶ ತ್ರಜ್ಞರನ್ನು ಒಟ್ಟುಗೂಡಿಸಬೇಕಿದೆ’ ಎಂದು ಬರೆದುಕೊಂಡಿದ್ದಾರೆ.</p>.<p>ಕೋವಿಡ್–19 ಅಪಾಯದ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಹುಲ್ ಈ ಹಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದರು. ಮಾತ್ರವಲ್ಲದೆ ಟೆಸ್ಟಿಂಗ್ ಕಿಟ್ಗಳನ್ನು ಸಕಾಲದಲ್ಲಿ ಖರೀದಿಸಲು ಸರ್ಕಾರ ಗಮನಕೊಡಲಿಲ್ಲ ಎಂದು ಟೀಕಿಸಿದ್ದರು.</p>.<p>ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹಾಗಾಗಿ ದೇಶದಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ ಆದೇಶವನ್ನು ಮೇ 3ರ ವರೆಗೆ ವಿಸ್ತರಿಸಲಾಗಿದೆ.</p>.<p>ಸದ್ಯ ದೇಶದಾದ್ಯಂತ 11 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 480 ಮಂದಿ ಮೃತಪಟ್ಟಿದ್ದಾರೆ. 1,900ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹಲಿ: </strong>ಜಗತ್ತಿನಾದ್ಯಂತ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕೋವಿಡ್–19 ಸೋಂಕು ದೊಡ್ಡ ಸವಾಲು ಮಾತ್ರವಲ್ಲ. ಅದೊಂದು ಅವಕಾಶವೂ ಹೌದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಜಾಗತಿಕ ಪಿಡುಗಾದ ಕೋವಿಡ್–19 ದೊಡ್ಡ ಸವಾಲು. ಆದರೆ, ಅದೊಂದು ಅವಕಾಶವೂ ಆಗಿದೆ. ಬಿಕ್ಕಟ್ಟಿನ ಸಂದರ್ಭಗಳಲ್ಲಿ ಹೊಸರೀತಿಯ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮಲ್ಲಿರುವ ಭಾರಿ ಸಂಖ್ಯೆಯ ವಿಜ್ಞಾನಿಗಳು, ಎಂಜಿನಿಯರ್ಗಳು, ಅಂಕಿ–ಅಂಶ ತ್ರಜ್ಞರನ್ನು ಒಟ್ಟುಗೂಡಿಸಬೇಕಿದೆ’ ಎಂದು ಬರೆದುಕೊಂಡಿದ್ದಾರೆ.</p>.<p>ಕೋವಿಡ್–19 ಅಪಾಯದ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಹುಲ್ ಈ ಹಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದರು. ಮಾತ್ರವಲ್ಲದೆ ಟೆಸ್ಟಿಂಗ್ ಕಿಟ್ಗಳನ್ನು ಸಕಾಲದಲ್ಲಿ ಖರೀದಿಸಲು ಸರ್ಕಾರ ಗಮನಕೊಡಲಿಲ್ಲ ಎಂದು ಟೀಕಿಸಿದ್ದರು.</p>.<p>ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹಾಗಾಗಿ ದೇಶದಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ ಆದೇಶವನ್ನು ಮೇ 3ರ ವರೆಗೆ ವಿಸ್ತರಿಸಲಾಗಿದೆ.</p>.<p>ಸದ್ಯ ದೇಶದಾದ್ಯಂತ 11 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 480 ಮಂದಿ ಮೃತಪಟ್ಟಿದ್ದಾರೆ. 1,900ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>