ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.4.5ಕ್ಕೆ ಕುಸಿದಿದ್ದರ ಹಿನ್ನೆಲೆಯಲ್ಲಿ ಶುಕ್ರವಾರ ಮಾತನಾಡಿರುವ ಮಾಜಿ ಪ್ರಧಾನಿ, ‘ಕೇಂದ್ರ ಸರ್ಕಾರವು ದೇಶವನ್ನು ಪ್ರಗತಿಯ ದಾರಿಗೆ ಮರಳಿ ತರಬೇಕೆಂದರೆ ಸಮಾಜದ ವಾತಾವರಣವನ್ನು ಬದಲಾಯಿಸಲು ಪ್ರಯತ್ನಿಸಬೇಕು. ಕೇವಲ ನೀತಿಗಳನ್ನು ಬದಲಾಯಿಸುವುದರಿಂದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವುದು ಸಾಧ್ಯವಿಲ್ಲ,’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.