ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿಯುತ್ತಿರುವ ಆರ್ಥಿಕತೆ ಇಂದಿನ ಸಾಮಾಜಿಕ ಸ್ಥಿತಿಯ ಪ್ರತಿಬಿಂಬ: ಮನಮೋಹನ್ ಸಿಂಗ್

Last Updated 30 ನವೆಂಬರ್ 2019, 4:28 IST
ಅಕ್ಷರ ಗಾತ್ರ

ನವದೆಹಲಿ: ಕುಸಿಯುತ್ತಿರುವ ದೇಶದ ಆರ್ಥಿಕತೆ ‘ಇಂದಿನ ಸಾಮಾಜಿಕ ಸ್ಥಿತಿಯ ಪ್ರತಿಬಿಂಬ’ ಎಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ವ್ಯಾಖ್ಯಾನಿಸಿದ್ದಾರೆ. ಸಾಮಾಜಿಕ ಸಾಮರಸ್ಯ ಮತ್ತು ದೇಶದ ಪ್ರಗತಿ ಎರಡು ಪ್ರತ್ಯೇಕ ಅಂಶಗಳಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರಿತುಕೊಂಡರೆ ಮಾತ್ರ ನಿರಂತರ ಆರ್ಥಿಕ ಬೆಳವಣಿಗೆ ಸಾಧಿಸಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.

‘ನಮ್ಮ ಆರ್ಥಿಕತೆ ಚಿಂತಾಜನಕವಾಗಿದೆ. ಅದಕ್ಕಿಂತ ಹೆಚ್ಚಿನಕಳವಳಕಾರಿಯಾಗಿರುವುದು ನಮ್ಮ ಸಾಮಾಜಿಕ ಸ್ಥಿತಿ. ಆರ್ಥಿಕ ಸ್ಥಿತಿಯು ಸಮಾಜದ ಪ್ರತಿಬಿಂಬವಾಗಿದೆ. ಇಂದು ನಮ್ಮ ಸಾಮಾಜಿಕ ನಂಬಿಕೆ ಮತ್ತು ವಿಶ್ವಾಸ ಛಿದ್ರವಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳು ಒಂದಕ್ಕೊಂದು ಪೂರಕವಾಗಿರುತ್ತವೆ,’ ಎಂದು ಮನಮೋಹನ್‌ ಸಿಂಗ್‌ ಹೇಳಿದ್ದಾರೆ.

ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.4.5ಕ್ಕೆ ಕುಸಿದಿದ್ದರ ಹಿನ್ನೆಲೆಯಲ್ಲಿ ಶುಕ್ರವಾರ ಮಾತನಾಡಿರುವ ಮಾಜಿ ಪ್ರಧಾನಿ, ‘ಕೇಂದ್ರ ಸರ್ಕಾರವು ದೇಶವನ್ನು ಪ್ರಗತಿಯ ದಾರಿಗೆ ಮರಳಿ ತರಬೇಕೆಂದರೆ ಸಮಾಜದ ವಾತಾವರಣವನ್ನು ಬದಲಾಯಿಸಲು ಪ್ರಯತ್ನಿಸಬೇಕು. ಕೇವಲ ನೀತಿಗಳನ್ನು ಬದಲಾಯಿಸುವುದರಿಂದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವುದು ಸಾಧ್ಯವಿಲ್ಲ,’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT