ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಮತ್ತು ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ತಲುಪಿಸಲು ವಿಶೇಷ ರೈಲುಗಳನ್ನು ನಿಯೋಜಿಸುವಂತೆ ಆಯಾ ರಾಜ್ಯ ಸರ್ಕಾರಗಳು ಕೇಂದ್ರದ ಮೇಲೆ ಒತ್ತಡ ಹೇರುತ್ತಿವೆ. ಬಿಹಾರ, ರಾಜಸ್ಥಾನ, ಜಾರ್ಖಂಡ್ ಮತ್ತುಮಹಾರಾಷ್ಟ್ರ ಸರ್ಕಾರಗಳು ಈ ರೀತಿ ಮನವಿ ಮಾಡಿಕೊಂಡಿವೆ.