ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುವಳ್ಳುವರ್‌ ಪ್ರತಿಮೆಗೆ ಸೆಗಣಿ ಬಳಿದು ಅಪಮಾನ

Last Updated 4 ನವೆಂಬರ್ 2019, 19:52 IST
ಅಕ್ಷರ ಗಾತ್ರ

ಚೆನ್ನೈ: ತಿರುವಳ್ಳುವರ್ ಅವರನ್ನು ಕೇಸರೀಕರಣಗೊಳಿಸುವ ಬಿಜೆಪಿ ಯತ್ನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆದಿರುವಂತೆಯೇ, ತಂಜಾವೂರು ಜಿಲ್ಲೆಯಲ್ಲಿ ತಮಿಳು ಕವಿಯ ಪ್ರತಿಮೆಯೊಂದಕ್ಕೆ ಸೆಗಣಿ ಎರಚಿ ವಿರೂಪಗೊಳಿಸಿರುವ ಘಟನೆ ಸೋಮವಾರ ನಡೆದಿದೆ.

ತಂಜಾವೂರಿನ ಪಿಳ್ಳಯಾರ್‌ಪಟ್ಟಿ ಪಂಚಾಯಿತಿ ವ್ಯಾಪ್ತಿಯಲ್ಲಿ 2005ರಲ್ಲಿ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಸೆಗಣಿಯನ್ನು ಬಳಿದಿರುವುದು ಸೋಮವಾರ ಬೆಳಿಗ್ಗೆ ಗೊತ್ತಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಮೆ ಸ್ವಚ್ಛಗೊಳಿಸಲು ಕ್ರಮಕೈಗೊಂಡರು. ಕಿಡಿಗೇಡಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT