ತಂಜಾವೂರಿನ ಪಿಳ್ಳಯಾರ್ಪಟ್ಟಿ ಪಂಚಾಯಿತಿ ವ್ಯಾಪ್ತಿಯಲ್ಲಿ 2005ರಲ್ಲಿ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಸೆಗಣಿಯನ್ನು ಬಳಿದಿರುವುದು ಸೋಮವಾರ ಬೆಳಿಗ್ಗೆ ಗೊತ್ತಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಮೆ ಸ್ವಚ್ಛಗೊಳಿಸಲು ಕ್ರಮಕೈಗೊಂಡರು. ಕಿಡಿಗೇಡಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.