ಸರ್ಕಾರಕ್ಕೆ ಕಾಳಜಿ ಇದೆ: ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಸರ್ಕಾರವು ವಲಸೆ ಕಾರ್ಮಿಕರ ಪರ ಕಾಳಜಿ ಹೊಂದಿದ್ದು, ಅವರಿಗೆ ಅಗತ್ಯ ಸಹಾಯವನ್ನು ಮಾಡಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಆಯಾ ರಾಜ್ಯಗಳೊಂದಿಗೆ ಸಮಾಲೋಚಿಸುತ್ತಿದೆ. ಪ್ರಶಾಂತ್ ಅವರು ತಮ್ಮ ಅರ್ಜಿದಾರರು ನೀಡಿದ ಮಾಹಿತಿ ಆಧಾರದ ಮೇಲೆ ತಪ್ಪಾದ ವರದಿಗಳನ್ನು ನೀಡುತ್ತಿದ್ದಾರೆ’ ಎಂದು ದೂರಿದರು.