ಎರಡಕ್ಕಿಂತ ಹೆಚ್ಚು ಮಕ್ಕಳಿರುವವರ ಮತದಾನದ ಹಕ್ಕನ್ನು ರದ್ದುಪಡಿಸಬೇಕು. ಅಂತಹವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಬೇಕು. ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಬಳಸದಂತೆ ನಿರ್ಬಂಧ ವಿಧಿಸಬೇಕು. ಸರ್ಕಾರಿ ಉದ್ಯೋಗಗಳನ್ನೂ ನೀಡಬಾರದು. ಹೀಗೆ ಮಾಡಿದರೆ ಜನಸಂಖ್ಯೆ ತನ್ನಿಂದತಾನೇ ನಿಯಂತ್ರಣಕ್ಕೆ ಬರಲಿದೆ ಎಂದು ರಾಮ್ದೇವ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.