ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಕ್ಕೆ ದುಡಿಯದವರನ್ನು ನಾನು ಹುಡುಕುತ್ತೇನೆ: ಪ್ರಿಯಾಂಕಾ ಗಾಂಧಿ

Last Updated 13 ಜೂನ್ 2019, 14:27 IST
ಅಕ್ಷರ ಗಾತ್ರ

ರಾಯಬರೇಲಿ: ರಾಯಬರೇಲ್ಲಿ ಗುರುವಾರ ಕಾಂಗ್ರೆಸ್‌ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ನಾಯಕರು, ಕಾರ್ಯಕರ್ತರವಿರುದ್ಧ ತೀಕ್ಷ್ಣ ಮಾತುಗಳನ್ನಾಡಿದ್ದಾರೆ.

‘ನಾನು ಮಾತನಾಡಬೇಕು ಎಂದು ಕೇಳಿದ್ದೀರಿ. ನನ್ನನ್ನು ಮಾತನಾಡಲು ಬಿಡಿ. ಆದರೆ, ನನ್ನ ಮಾತುಗಳು ಮೃಧುವಾಗಿರುವುದಿಲ್ಲ. ನೇರವಾಗಿರುತ್ತವೆ. ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡದವರನ್ನು ನಾನು ಪತ್ತೆ ಮಾಡುತ್ತೇನೆ,’ ಎಂದು ಅವರು ಘೋಷಿಸಿದ್ದಾರೆ.

ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಪೈಕಿ ಕಾಂಗ್ರೆಸ್‌ ಕೇವಲ ಒಂದರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಅದೂ ರಾಯಬರೇಲಿ ಕ್ಷೇತ್ರವಷ್ಟೇ. ಕಾಂಗ್ರೆಸ್‌ನ ಮತ್ತೊಂದು ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಲ್ಲಿ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೇ ಸೋಲುಂಡಿದ್ದಾರೆ. ಸಂದಿಗ್ಧ ಕಾಲದಲ್ಲೂ ರಾಯಬರೇಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಗೆಲ್ಲಿಸಿದ ಹಿನ್ನೆಲೆಯಲ್ಲಿ ಗುರುವಾರ ಪಕ್ಷದ ವತಿಯಿಂದ ಮತದಾರರಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕರ್ತರ ಒತ್ತಾಯದ ಮೇರೆಗೆಭಾಷಣ ಆರಂಭಿಸಿದಪ್ರಿಯಾಂಕಾ ಗಾಂಧಿ ಅವರು ಕಾರ್ಯಕರ್ತರು ನಾಯಕರ ವಿರುದ್ಧ ಕಟುವಾಗಿಮಾತನಾಡಿದರು. ‘ನಾನು ಇಲ್ಲಿ ಏನನ್ನೂ ಮಾತನಾಡದೇ ಇರಲು ನಿರ್ಧರಿಸಿದ್ದೆ. ಆದರೆ, ನನ್ನನ್ನು ಮಾತನಾಡಲು ಕೇಳಲಾಯಿತು. ಹಾಗಿದ್ದರೆ, ನಿಜ ಮಾತನಾಡಲು ಬಿಡಿ. ಆ ಸತ್ಯ ಏನೆಂದರೆ ಈ ಕ್ಷೇತ್ರದಲ್ಲಿ ನಾವು ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು, ಸೋನಿಯಾ ಗಾಂಧಿ ಅವರ ವರ್ಚಸ್ಸು ಮತ್ತು ರಾಯಬರೇಲಿಯ ಜನರಿಂದ ಮಾತ್ರ,’ಎಂದು ಅವರು ನಿಷ್ಠುರ ನುಡಿಗಳನ್ನಾಡಿದರು.

‘ಪಕ್ಷಕ್ಕಾಗಿ ಯಾರು ಕೆಲಸ ಮಾಡಿದ್ದೀರಿ ಎಂಬುದು ಅವರ ಆತ್ಮಕ್ಕೆ ಗೊತ್ತಿದೆ. ಯಾರು ಕೆಲಸ ಮಾಡಿಲ್ಲ ಎಂಬುದನ್ನು ನಾನು ಹುಡುಕುತ್ತೇನೆ,’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT