ಮುಂಬೈ: ಸ್ವಾಮಿನಾಥನ್ ವರದಿ ಜಾರಿಗೆ, ಕನಿಷ್ಠ ಬೆಂಬಲ ಬೆಲೆ, ಬರ ಪರಿಹಾರ... ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮಹಾರಾಷ್ಟ್ರದ ರೈತರು ಹಾಗೂ ಬುಡಕಟ್ಟು ಜನಾಂಗದವರು ದಾದಾರ್ ಎಂಬಲ್ಲಿ ಕೈಗೊಂಡಿರುವಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ದಕ್ಷಿಣ ಮಹಾರಾಷ್ಟ್ರ, ವಿದರ್ಭ, ಅಹಮದ್ನಗರ ಸೇರಿದಂತೆ ನಾನಾ ಕಡೆಯಿಂದ ಬಂದು ಮುಂಬೈನ ಆಜಾದ್ ಮೈದಾನದಲ್ಲಿ ಸುಮಾರು 11 ಗಂಟೆಗೆ ಸೇರಿದ 10 ಸಾವಿರಕ್ಕೂ ಹೆಚ್ಚು ಮಂದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ.
ಈ ಹೋರಾಟಕ್ಕೆ ಲೋಕ ಸಂಘರ್ಷ ಮೋರ್ಚಾ,ಆಮ್ಆದ್ಮಿ ಪಕ್ಷ ಹಾಗೂಕೆಲವು ಸಾಮಾಜಿಕಸಂಘಟನೆಗಳು ಬೆಂಬಲ ಸೂಚಿಸಿವೆ.
Maharashtra: Lok Sangharsh Morcha that comprises of tribals and farmers across the state reaches Dadar. The Morcha that has begun from Kalyan yesterday is marching towards Azad Maidan in Mumbai. The farmers are demanding loan waiver and drought compensation among others. pic.twitter.com/K6c3RHp4jb
ಈ ವೇಳೆ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್, ‘ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನಿಮ್ಮನ್ನು ಶೀಘ್ರವೇ ಭೇಟಿ ಮಾಡಲಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಇತರ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಲಿದ್ದಾರೆ’ ಎಂಬ ಭರವಸೆ ನೀಡಿದರು.