‘ನನ್ನ ಮಗನ ಶಾಲೆಯಿಂದ ವಾಪಸ್ ಬರುತ್ತಿದ್ದೆ. ಆಗ ನೂರಾರು ಸ್ಥಳೀಯ ನಿವಾಸಿಗಳು ನನ್ನನ್ನು ಸುತ್ತುವರಿದು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಬೆದರಿಸಲು ಯತ್ನಿಸಿದರು. ನಾವು ಜಾತ್ಯತೀತ ದೇಶದಲ್ಲಿ ಜೀವಿಸುತ್ತಿದ್ದೇವೆ. ಯಾವುದೇ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಪ್ರಜಾಪ್ರಭುತ್ವದ ಹಕ್ಕು. ದೇಶದ ಉತ್ತಮ ಪ್ರಜೆಯಾಗಿ ನನ್ನ ಕರ್ತವ್ಯ ನಿರ್ವಹಿಸಿದ್ದೇನೆ. ನಾನು ಜಾತ್ಯತೀತ ವ್ಯಕ್ತಿ. ಇದರಿಂದಾಗಿಯೇ ನನ್ನ ಕುಟುಂಬ ಸದಸ್ಯರಿಂದ ಜೀವಬೆದರಿಕೆ ಎದುರಿಸುತ್ತಿದ್ದೇನೆ’ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.