ಪರಾರಿಯಾಗಿದ್ದ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಇಬ್ಬರು ಹಾಗೂ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಗೆ ಸೇರಿದ ಒಬ್ಬ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಗಣ್ಯ ವ್ಯಕ್ತಿಗಳ ದ್ವಾರದಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣೆಗೆ ಒಳಪಡದೇ ತಪ್ಪಿಸಿಕೊಳ್ಳುತ್ತಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಸೌದಿ ಅರೇಬಿಯಾದಿಂದ ಬಂದ ಕೋವಿಡ್ ಸೋಂಕಿತ 67 ವರ್ಷದ ಮಹಿಳೆಯು ತನ್ನ ಅಳಿಯ ಐಪಿಎಸ್ ಅಧಿಕಾರಿಯ ನೆರವಿನೊಂದಿಗೆ ತಪಾಸಣೆಯಿಂದ ತಪ್ಪಿಸಿಕೊಂಡಿದ್ದರು.