ಬುಧವಾರ ರಾತ್ರಿ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಸಂತ್ರಸ್ತೆಯ ಕುಟುಂಬದವರು ದೂರು ನೀಡಿದರೂ ದಾಖಲಿಸದೆ ತಡ ಮಾಡಿದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಠಾಣೆಯ ವ್ಯಾಪ್ತಿಯಲ್ಲಿ ಸರಿಯಾದ ಗಸ್ತು ವ್ಯವಸ್ಥೆ ಇಲ್ಲದೆ, ಲಾರಿ ಚಾಲಕರು ಎಲ್ಲೆಂದರಲ್ಲಿ ಲಾರಿಗಳನ್ನು ನಿಲ್ಲಿಸಿ ಅನೈತಿಕ ಚಟುವಟಿಕೆಗಳಲ್ಲಿತೊಡಗುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಈ ಸಂಬಂಧ ಶನಿವಾರ ರಾತ್ರಿಯೇ ಮೂವರು ಸಿಬ್ಬಂದಿಯನ್ನು ಅಮಾನತುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.