'ಹುಂಡಿ ಕಾಣಿಕೆ, ಲಡ್ಡುಗಳ ಮಾರಾಟ ಹಾಗೂ ವಿಶೇಷ ದರ್ಶನದಿಂದ ದೇಗುಲಕ್ಕೆ ಪ್ರತಿ ತಿಂಗಳು ದೊರಕುತ್ತಿದ್ದ ಸುಮಾರು₹ 200 ಕೋಟಿ ಆದಾಯ ನಿಂತುಹೋಗಿದೆ. ಆದರೂ ಮಾರ್ಚ್, ಏಪ್ರಿಲ್ ವೇತನ ಪಾವತಿಸಿದ್ದೇವೆ. ಮೇ ತಿಂಗಳ ವೇತನಕ್ಕೂ ವ್ಯವಸ್ಥೆ ಮಾಡಿದ್ದೇವೆ. ಜೂನ್ನಲ್ಲಿ ಸಹ ದೇಗುಲದ ಮೂಲನಿಧಿ, ಠೇವಣಿ ಅಥವಾ ಚಿನ್ನವನ್ನು ಉಪಯೋಗಿಸದೆ ಪರಿಸ್ಥಿತಿ ನಿರ್ವಹಿಸಲು ಯತ್ನಿಸುತ್ತೇವೆ' ಎಂದು ಅವರು ಹೇಳಿದ್ದಾರೆ.