‘ಇವತ್ತು ಭರವಸೆ ನೀಡಿ, ನಾಳೆಯೇ ಅದನ್ನು ಮುರಿಯುತ್ತಾರೆ ಎನ್ನುವುದು ಬೇಸರದ ವಿಷಯ. ಪ್ರಜಾಪ್ರಭುತ್ವದಲ್ಲಿ ಇದು ಆಗುತ್ತದೆಯೇ?.. ಯಡಿಯೂರಪ್ಪನವರೆ ಗುಂಡೇಟಿಗೆ ಬಲಿಯಾದವರ ಕುಟುಂಬಗಳಿಗೆ ನೀಡಲು ನಿಮ್ಮ ಬಳಿ ಹಣ ಇಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಮಮತಾ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ‘ಯಾರಿಗೂ ಹೆದರಬೇಡಿ. ಐಐಟಿ ಕಾನ್ಪುರ, ಜಾಮಿಯಾ ಮಿಲಿಯ ಹಾಗೂ ಪ್ರತಿಭಟಿಸುತ್ತಿರುವ ಇತರೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೆ ನಿಮ್ಮೊಂದಿಗೆ ನಾವಿದ್ದೇವೆ. ಬಿಜೆಪಿಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬೆಂಕಿಯೊಂದಿಗೆ ಆಟವಾಡುವುದನ್ನು ಬಿಡಿ’ ಎಂದು ಹೇಳಿದರು.