‘ಬಡತನ ರೇಖೆಗಿಂತ ಕೆಳಗಿರುವವರಿಗೆ ಉಡುಗೊರೆ ಕೊಡುವುದು ತಪ್ಪಲ್ಲ. ಆದರೆ, ಎಲ್ಲ ಪಡಿತರ ಚೀಟಿದಾರರಿಗೂ ಹೀಗೆ ಉಡುಗೊರೆ ನೀಡುವುದರ ಹಿಂದಿನ ಉದ್ದೇಶವೇನು? ಹಬ್ಬದ ಹೆಸರಿನಲ್ಲಿ ಸರ್ಕಾರದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದೀರಿ. ರಾಜಕೀಯ ಪಕ್ಷಗಳು ತಮ್ಮ ಹಣ ನೀಡಿದರೆ ಆಗ ಈ ಪ್ರಶ್ನೆಗಳನ್ನು ನಾವು ಕೇಳುವುದಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ರಾಜ್ಯದ ಅಡ್ವೊಕೇಟ್ ಜನರಲ್ ಅಂತಹವರೂ ಸರ್ಕಾರದಿಂದ ಪೊಂಗಲ್ ಹೆಸರಿನಲ್ಲಿ ₹ 1,000 ಪಡೆಯುವ ಅಗತ್ಯವಾದರೂ ಏನಿದೆ’ ಎಂದು ಪೀಠ ಅಚ್ಚರಿ ವ್ಯಕ್ತಪಡಿಸಿತು.