‘ಮಾರುಕಟ್ಟೆಯಿಂದ ತಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತೇವೆ. ನಾವು ಬೀಸಾಡುವ ತ್ಯಾಜ್ಯ ಭೂಮಿಯಲ್ಲಿ ಕರಗದೇ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಮನುಷ್ಯರ ಸೇರಿ ಪರಿಸರ, ಪ್ರಾಣಿ, ಪಕ್ಷಿಗಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಪ್ರಾಣಿಗಳ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಮಾರುಕಟ್ಟೆಗಳಿಗೆ ಹೋಗುವಾಗ ಮನೆಯಿಂದ ಬಟ್ಟೆ ಅಥವಾ ಸೆಣಬಿನ ಕೈಚೀಲ ತೆಗೆದುಕೊಂಡು ಹೋಗಬೇಕು. ಪರಿಸರವನ್ನು ನಾವು ಸಂರಕ್ಷಣೆ ಮಾಡಿದರೆ ಮಾತ್ರ ನಮ್ಮನ್ನು ಪರಿಸರ ಸಂರಕ್ಷಣೆ ಮಾಡುತ್ತದೆ’ ಎಂದು ಹೇಳಿದರು.