ಅಂತರಕಾಲೇಜು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಪನ್ಯಾಸಕರಾದ ಅಕ್ಷಯ್ ಕುಮಾರ್ ಮತ್ತು ಅಂಬಾ ಭವಾನಿ ನಿರ್ವಹಿಸಿದರು. ಟ್ರಸ್ಟ್ ಉಪಾಧ್ಯಕ್ಷ ಮರೀಗೌಡ, ಸಂಜೆ ಕಾಲೇಜು ಪ್ರಾಂಶುಪಾಲೆ ಎಚ್.ಎ. ರೇಖಾ, ಪ್ರಾಧ್ಯಾಪಕರಾದ ಎಚ್.ಬಿ. ಅಜಿತ್ ಪ್ರಸಾದ್, ಎಚ್.ಪಿ. ಸುಮಾ ವೀಣಾ, ಮನು ಹಿರಿಯಾಳ್, ಅಂಬಾ ಭವಾನಿ, ಬಿ.ಡಿ. ಗಿರೀಶ್ ಇದ್ದರು.