ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್ ಚಿಂಚನಸೂರ್ ಅವರಿಗೆ ಮರು ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಂಕ್ ಮಿಸ್ಟೆಕ್ನಿಂದ ಈ ಪ್ರಮಾದವಾಗಿದ್ದು ಮರು ಮತದಾನಕ್ಕೆ ಅವಕಾಶ ಮಾಡಿಕೊಟ್ಟಿರುವುದನ್ನು ಸಚಿವ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ನಡೆಯನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಖಂಡಿಸಿದ್ದು ಚುನಾವಣಾ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿವೆ.