ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಮತ ಚಲಾವಣೆ ಗೊಂದಲ

Last Updated 23 ಮಾರ್ಚ್ 2018, 7:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆಯುತ್ತಿರುವ  ಚುನಾವಣೆಯಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಅವರು ಬೇರೆ ಅಭ್ಯರ್ಥಿಗೆ ಮತ ಹಾಕಿದ್ದು ಗೊಂದಲಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಅವರಿಗೆ ಮರು ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಂಕ್ ಮಿಸ್ಟೆಕ್‌ನಿಂದ ಈ ಪ್ರಮಾದವಾಗಿದ್ದು ಮರು ಮತದಾನಕ್ಕೆ ಅವಕಾಶ ಮಾಡಿಕೊಟ್ಟಿರುವುದನ್ನು ಸಚಿವ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ನಡೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಖಂಡಿಸಿದ್ದು ಚುನಾವಣಾ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿವೆ.

ಜೆಡಿಎಸ್ ಪಕ್ಷದ ಶಾಸಕರು ಸಭೆ ನಡೆಸುತ್ತಿದ್ದು ಚುನಾವಣೆ ಬಹಿಷ್ಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮೂರನೇ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್‌ ಹಾಗೂ ಜೆಡಿಎಸ್‌ ಅಭ್ಯರ್ಥಿ ಬಿ.ಎಂ.ಫಾರೂಕ್‌ ನಡುವೆ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಹಣಾಹಣಿ ನಡೆಯುವ ನಿರೀಕ್ಷೆ ಇದೆ.

ವಿಧಾನಸಭೆ ಒಟ್ಟು ಸದಸ್ಯರ ಸಂಖ್ಯೆ 217. ಇದರಲ್ಲಿ 7 ಸ್ಥಾನಗಳು ಖಾಲಿ ಇವೆ. ಕಾಂಗ್ರೆಸ್‌ 123, ಬಿಜೆಪಿ 43 ಹಾಗೂ ಜೆಡಿಎಸ್‌ (ಏಳು ಬಂಡಾಯ ಶಾಸಕರೂ ಸೇರಿ) 37 ಸದಸ್ಯರಿದ್ದಾರೆ. ಪ್ರತಿ ಅಭ್ಯರ್ಥಿ ಗೆಲ್ಲಲು 44 ಮತಗಳು ಬೇಕಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT