<p><strong>ಪಾಲ್ಗರ್, ಮಹಾರಾಷ್ಟ್ರ: </strong>ಬುಡಕಟ್ಟು ಸಮುದಾಯ ಮಕ್ಕಳ ಶಾಲೆಯಲ್ಲಿಕಲಿಯುತ್ತಿದ್ದ 14 ವರ್ಷದ ಬುಡಕಟ್ಟು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಅಪೌಷ್ಟಿಕತೆಯಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಸ್ವಯಂಸೇವಾ ಸಂಸ್ಥೆಯೊಂದು ಆರೋಪಿಸಿಸಿದೆ.</p>.<p>ಮುಂಬೈಗೆ ಹತ್ತಿರವಿರುವ ವಾಡಾ ತಾಲ್ಲೂಕಿನಲ್ಲಿರುವ ಬುಡಕಟ್ಟು ಸಮುದಾಯದ ಆಶ್ರಮ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಶನಿವಾರ ಜ್ವರ ಕಾಣಿಸಿಕೊಂಡಿತು. ಆರಂಭಿಕ ಹಂತದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.</p>.<p>‘ರಕ್ತಹೀನತೆ, ಸ್ನಾಯುಸೆಳೆತ ಕಂಡುಬಂದಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಠಾಣೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು’ ಎಂದುಪಾಲ್ಗರ್ನ ಸರ್ಕಾರಿ ವೈದ್ಯ ಕಾಂಚನ್ ವಾನೆರೆ ತಿಳಿಸಿದರು.</p>.<p>ಅಪೌಷ್ಟಿಕತೆಯೇ ಕಾರಣ: ಅಪೌಷ್ಟಿಕತೆಯಿಂದಲೇ ಬಾಲಕಿ ಸಾವನ್ನಪ್ಪಳು ಕಾರಣ ಎಂದು ಬುಡಕಟ್ಟು ಸಮುದಾಯದ ಏಳಿಗೆಗಾಗಿ ಶ್ರಮಿಸುವ ‘ಶ್ರಮಜೀವಿ ಸಂಘಟನೆ’ ತಿಳಿಸಿದೆ.</p>.<p>‘ಬಾಲಕಿಗೆ ಹಿಮೊಗ್ಲೋಬಿನ್ ಪ್ರಮಾಣವೂ ಏಕಾಏಕಿ ಕಡಿಮೆಯಾಗಿದೆ. ಅಪೌಷ್ಟಿಕತೆಯಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ’ ಎಂದು ಸಂಘಟನೆ ಮುಖ್ಯಸ್ಥ ವಿವೇಕ್ ಪಂಡಿತ್ ತಿಳಿಸಿದ್ದಾರೆ.</p>.<p>ಮೂರು ದಿನಗಳಿಂದ ಬಾಲಕಿಗೆ ಜ್ವರ ಕಾಣಿಸಿಕೊಂಡಿತು. ಆದರೂ ಶಾಲಾ ಆಡಳಿತ ಮಂಡಳಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಕಲ್ಪಿಸಿರಲಿಲ್ಲ,ಬುಡಕಟ್ಟು ಸಮುದಾಯದ ಮಕ್ಕಳ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಈ ಪ್ರಕರಣದಲ್ಲಿ ಕಂಡುಬಂದಿದೆ ಎಂದು ಅವರು ದೂರಿದ್ದಾರೆ.</p>.<p>ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾನೆರೆ, ವೈದ್ಯಕೀಯ ವರದಿ ಬಂದ ಬಳಿಕ ಸಾವಿನ ನೈಜ ಕಾರಣ ತಿಳಿದುಬರಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಗರ್, ಮಹಾರಾಷ್ಟ್ರ: </strong>ಬುಡಕಟ್ಟು ಸಮುದಾಯ ಮಕ್ಕಳ ಶಾಲೆಯಲ್ಲಿಕಲಿಯುತ್ತಿದ್ದ 14 ವರ್ಷದ ಬುಡಕಟ್ಟು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಅಪೌಷ್ಟಿಕತೆಯಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಸ್ವಯಂಸೇವಾ ಸಂಸ್ಥೆಯೊಂದು ಆರೋಪಿಸಿಸಿದೆ.</p>.<p>ಮುಂಬೈಗೆ ಹತ್ತಿರವಿರುವ ವಾಡಾ ತಾಲ್ಲೂಕಿನಲ್ಲಿರುವ ಬುಡಕಟ್ಟು ಸಮುದಾಯದ ಆಶ್ರಮ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಶನಿವಾರ ಜ್ವರ ಕಾಣಿಸಿಕೊಂಡಿತು. ಆರಂಭಿಕ ಹಂತದಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.</p>.<p>‘ರಕ್ತಹೀನತೆ, ಸ್ನಾಯುಸೆಳೆತ ಕಂಡುಬಂದಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಠಾಣೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು’ ಎಂದುಪಾಲ್ಗರ್ನ ಸರ್ಕಾರಿ ವೈದ್ಯ ಕಾಂಚನ್ ವಾನೆರೆ ತಿಳಿಸಿದರು.</p>.<p>ಅಪೌಷ್ಟಿಕತೆಯೇ ಕಾರಣ: ಅಪೌಷ್ಟಿಕತೆಯಿಂದಲೇ ಬಾಲಕಿ ಸಾವನ್ನಪ್ಪಳು ಕಾರಣ ಎಂದು ಬುಡಕಟ್ಟು ಸಮುದಾಯದ ಏಳಿಗೆಗಾಗಿ ಶ್ರಮಿಸುವ ‘ಶ್ರಮಜೀವಿ ಸಂಘಟನೆ’ ತಿಳಿಸಿದೆ.</p>.<p>‘ಬಾಲಕಿಗೆ ಹಿಮೊಗ್ಲೋಬಿನ್ ಪ್ರಮಾಣವೂ ಏಕಾಏಕಿ ಕಡಿಮೆಯಾಗಿದೆ. ಅಪೌಷ್ಟಿಕತೆಯಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ’ ಎಂದು ಸಂಘಟನೆ ಮುಖ್ಯಸ್ಥ ವಿವೇಕ್ ಪಂಡಿತ್ ತಿಳಿಸಿದ್ದಾರೆ.</p>.<p>ಮೂರು ದಿನಗಳಿಂದ ಬಾಲಕಿಗೆ ಜ್ವರ ಕಾಣಿಸಿಕೊಂಡಿತು. ಆದರೂ ಶಾಲಾ ಆಡಳಿತ ಮಂಡಳಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಕಲ್ಪಿಸಿರಲಿಲ್ಲ,ಬುಡಕಟ್ಟು ಸಮುದಾಯದ ಮಕ್ಕಳ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಈ ಪ್ರಕರಣದಲ್ಲಿ ಕಂಡುಬಂದಿದೆ ಎಂದು ಅವರು ದೂರಿದ್ದಾರೆ.</p>.<p>ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾನೆರೆ, ವೈದ್ಯಕೀಯ ವರದಿ ಬಂದ ಬಳಿಕ ಸಾವಿನ ನೈಜ ಕಾರಣ ತಿಳಿದುಬರಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>