ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಈ ಯುವಕರನ್ನು ಪೊಲೀಸರು ವಿಚಾರಣೆಗೆಂದುವಶಕ್ಕೆ ತೆಗೆದುಕೊಂಡಿದ್ದರು. ಐಪಿಸಿ 353ರ ಅನ್ವಯ (ಸರ್ಕಾರಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸುವುದು) ಪ್ರಕರಣ ದಾಖಲಿಸಲಾಗಿತ್ತು. ಸ್ಥಳೀಯ ನ್ಯಾಯಾಲಯವು ನೀಡಿದ ಜಾಮೀನಿನ ಮೇಲೆ ಹೊರ ಬಂದ ಆದಿವಾಸಿಗಳು ಪೊಲೀಸರು ನಮಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದರು.