ನವದೆಹಲಿ : ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರ ಪ್ರಥಮ ಪುಣ್ಯಸ್ಮರಣೆಯ ನಿಮಿತ್ತ ಶುಕ್ರವಾರ ಇಲ್ಲಿನ ಸ್ಮಾರಕ ‘ಸದೈವ್ ಅಟಲ್’ ಬಳಿ ಪ್ರಾರ್ಥನಾ ಸಭೆ ನಡೆಯಿತು. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಾಜಪೇಯಿ ಅವರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.