ಅಗರ್ತಲ:ಭಾರತೀಯ ಪೌರತ್ವ (ತಿದ್ದುಪಡಿ) ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ತ್ರಿಪುರಾ ಪೊಲೀಸರು ಈಚೆಗೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.
ಪ್ರತಿಭಟನಾಕಾರರು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ, ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿದವರು ಆರೋಪವನ್ನು ನಿರಾಕರಿಸಿದ್ದಾರೆ.
ಬುಡಕಟ್ಟು ಸಂಘಟನೆಗಳುಜನವರಿ 30ರಂದು ಆಯೋಜಿಸಿದ್ದಪ್ರತಿಭಟನಾ ರ್ಯಾಲಿಯಲ್ಲಿ ಹಲವು ರಾಜಕೀಯ ನಾಯಕರೂ ಭಾಗವಹಿಸಿದ್ದರು. ಅಂದಿನ ರ್ಯಾಲಿ ಶಾಂತಿಯುತವಾಗಿ ನಡೆದಿತ್ತು ಎಂದು ಸಂಘಟಕರು ತಿಳಿಸಿದ್ದಾರೆ.
ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವಭಾರತೀಯ ಪೌರತ್ವ (ತಿದ್ದುಪಡಿ)ಮಸೂದೆಗೆ ಜನವರಿ 8ರಂದು ಲೋಕಸಭೆಯಲ್ಲಿ ಅನುಮೋದನೆ ದೊರೆತಿದೆ.