<p><strong>ಮುಂಬೈ: </strong>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ನಡೆಯುತ್ತಿರುವ ಸಿದ್ಧತೆಗಳು ‘ಗುಲಾಮರ ಮನಸ್ಥಿತಿ’ಯನ್ನು ಬಿಂಬಿಸುವಂತಿವೆಎಂದು ಶಿವಸೇನಾ ಟೀಕಿಸಿದೆ.</p>.<p>‘ಟ್ರಂಪ್ ಅವರ ಭಾರತ ಪ್ರವಾಸಕ್ಕೆ ನಡೆಯುತ್ತಿರುವ ಸಿದ್ಧತೆಗಳು ‘ಚಕ್ರವರ್ತಿ’ಯೊಬ್ಬ ಭೇಟಿ ನೀಡಿದಾಗ ಕೈಗೊಳ್ಳುವ ಸಿದ್ಧತೆಯ ಸ್ವರೂಪದಲ್ಲಿದೆ’ ಎಂದು ಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.</p>.<p>ಅಹಮದಾಬಾದ್ನ ಕೊಳೆಗೇರಿಗಳಿಗೆ ಅಡ್ಡಲಾಗಿ ದೊಡ್ಡ ಗೋಡೆಗಳನ್ನು ನಿರ್ಮಿಸುತ್ತಿರುವ ಬಗ್ಗೆ ಪತ್ರಿಕೆ ಆಕ್ಷೇಪ ವ್ಯಕ್ತಪಡಿಸಿದೆ. ‘ರೂಪಾಯಿ ಮೌಲ್ಯ ಕುಸಿತವನ್ನು ಟ್ರಂಪ್ ಭೇಟಿ ತಡೆಯದು. ಗೋಡೆ ಕಟ್ಟಲಾಗುತ್ತಿರುವ ಕೊಳೆಗೇರಿ ನಿವಾಸಿಗಳ ಸ್ಥಿತಿಯೂ ಬದಲಾಗದು’ ಎಂದು ಬರೆಯಲಾಗಿದೆ.</p>.<p>‘ಸ್ವಾತಂತ್ರ್ಯ ಸಿಗುವುದಕ್ಕೂ ಮುನ್ನ, ಬ್ರಿಟನ್ ರಾಜ ಅಥವಾ ರಾಣಿಯು ಭಾರತದಂತಹ ಗುಲಾಮ ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದರು. ಇದೇ ರೀತಿ ಟ್ರಂಪ್ ಅವರ ಭೇಟಿಗೆ ಭಾರತದ ತೆರಿಗೆದಾರರ ಹಣವನ್ನು ಸರ್ಕಾರ ವಿನಿಯೋಗಿಸುತ್ತಿದೆ. ಇದು ಗುಲಾಮಿ ಮನಸ್ಥಿತಿಯನ್ನು ಬಿಂಬಿಸುತ್ತದೆ’ ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ನಡೆಯುತ್ತಿರುವ ಸಿದ್ಧತೆಗಳು ‘ಗುಲಾಮರ ಮನಸ್ಥಿತಿ’ಯನ್ನು ಬಿಂಬಿಸುವಂತಿವೆಎಂದು ಶಿವಸೇನಾ ಟೀಕಿಸಿದೆ.</p>.<p>‘ಟ್ರಂಪ್ ಅವರ ಭಾರತ ಪ್ರವಾಸಕ್ಕೆ ನಡೆಯುತ್ತಿರುವ ಸಿದ್ಧತೆಗಳು ‘ಚಕ್ರವರ್ತಿ’ಯೊಬ್ಬ ಭೇಟಿ ನೀಡಿದಾಗ ಕೈಗೊಳ್ಳುವ ಸಿದ್ಧತೆಯ ಸ್ವರೂಪದಲ್ಲಿದೆ’ ಎಂದು ಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.</p>.<p>ಅಹಮದಾಬಾದ್ನ ಕೊಳೆಗೇರಿಗಳಿಗೆ ಅಡ್ಡಲಾಗಿ ದೊಡ್ಡ ಗೋಡೆಗಳನ್ನು ನಿರ್ಮಿಸುತ್ತಿರುವ ಬಗ್ಗೆ ಪತ್ರಿಕೆ ಆಕ್ಷೇಪ ವ್ಯಕ್ತಪಡಿಸಿದೆ. ‘ರೂಪಾಯಿ ಮೌಲ್ಯ ಕುಸಿತವನ್ನು ಟ್ರಂಪ್ ಭೇಟಿ ತಡೆಯದು. ಗೋಡೆ ಕಟ್ಟಲಾಗುತ್ತಿರುವ ಕೊಳೆಗೇರಿ ನಿವಾಸಿಗಳ ಸ್ಥಿತಿಯೂ ಬದಲಾಗದು’ ಎಂದು ಬರೆಯಲಾಗಿದೆ.</p>.<p>‘ಸ್ವಾತಂತ್ರ್ಯ ಸಿಗುವುದಕ್ಕೂ ಮುನ್ನ, ಬ್ರಿಟನ್ ರಾಜ ಅಥವಾ ರಾಣಿಯು ಭಾರತದಂತಹ ಗುಲಾಮ ರಾಷ್ಟ್ರಗಳಿಗೆ ಭೇಟಿ ನೀಡುತ್ತಿದ್ದರು. ಇದೇ ರೀತಿ ಟ್ರಂಪ್ ಅವರ ಭೇಟಿಗೆ ಭಾರತದ ತೆರಿಗೆದಾರರ ಹಣವನ್ನು ಸರ್ಕಾರ ವಿನಿಯೋಗಿಸುತ್ತಿದೆ. ಇದು ಗುಲಾಮಿ ಮನಸ್ಥಿತಿಯನ್ನು ಬಿಂಬಿಸುತ್ತದೆ’ ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>