<p><strong>ನವದೆಹಲಿ:</strong> ‘ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಪ್ರಕ್ರಿಯೆ ತಡೆಯಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ದೂರಿದ್ದಾರೆ.</p>.<p>‘ನಿಜವಾದ ಭಾರತೀಯರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ಭಾರತೀಯರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ನೋಂದಣಿ ಪ್ರಕ್ರಿಯೆ ತಡೆಯುವ ಶಕ್ತಿಗಳನ್ನು ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ. 1971ರ ನಂತರದ ಅಕ್ರಮ ವಲಸೆಗಾರರನ್ನು ಗುರುತಿಸುವುದೇ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಎನ್ಆರ್ಸಿ ಹೆಸರಿನಲ್ಲಿ ಕೆಲವು ಸಂಘಟನೆಗಳು ಹಿಂಸಾಚಾರ ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಇಂತಹ ಪ್ರಯತ್ನಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.</p>.<p>ಜುಲೈ 31ರಂದು ಎನ್ಆರ್ಸಿಯ ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಉಂಟಾಗುವ ಪರಿಸ್ಥಿತಿ ನಿಭಾಯಿಸುವ ಕುರಿತು ನವದೆಹಲಿಗೆ ಬಂದಿರುವ ಸೋನೊವಾಲ್, ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.</p>.<p>2018ರ ಜುಲೈ 30ರಂದು ಎನ್ಆರ್ಸಿ ಕರಡು ಪ್ರತಿ ಪ್ರಕಟಿಸಿದಾಗ ಭಾರಿ ವಿವಾದ ಸೃಷ್ಟಿಯಾಗಿತ್ತು. ಸುಮಾರು 40.7 ಲಕ್ಷ ಮಂದಿ ಕರಡು ಪ್ರತಿಯಿಂದ ಹೊರಗುಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಪ್ರಕ್ರಿಯೆ ತಡೆಯಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ದೂರಿದ್ದಾರೆ.</p>.<p>‘ನಿಜವಾದ ಭಾರತೀಯರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ಭಾರತೀಯರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ನೋಂದಣಿ ಪ್ರಕ್ರಿಯೆ ತಡೆಯುವ ಶಕ್ತಿಗಳನ್ನು ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ. 1971ರ ನಂತರದ ಅಕ್ರಮ ವಲಸೆಗಾರರನ್ನು ಗುರುತಿಸುವುದೇ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಎನ್ಆರ್ಸಿ ಹೆಸರಿನಲ್ಲಿ ಕೆಲವು ಸಂಘಟನೆಗಳು ಹಿಂಸಾಚಾರ ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಇಂತಹ ಪ್ರಯತ್ನಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.</p>.<p>ಜುಲೈ 31ರಂದು ಎನ್ಆರ್ಸಿಯ ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಉಂಟಾಗುವ ಪರಿಸ್ಥಿತಿ ನಿಭಾಯಿಸುವ ಕುರಿತು ನವದೆಹಲಿಗೆ ಬಂದಿರುವ ಸೋನೊವಾಲ್, ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.</p>.<p>2018ರ ಜುಲೈ 30ರಂದು ಎನ್ಆರ್ಸಿ ಕರಡು ಪ್ರತಿ ಪ್ರಕಟಿಸಿದಾಗ ಭಾರಿ ವಿವಾದ ಸೃಷ್ಟಿಯಾಗಿತ್ತು. ಸುಮಾರು 40.7 ಲಕ್ಷ ಮಂದಿ ಕರಡು ಪ್ರತಿಯಿಂದ ಹೊರಗುಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>